ವಿದ್ಯುತ್ ಶಾಕ್ ತಗುಲಿ ಹೊಸಂಗಡಿ ಅಂಗಡಿಪದವು ನಿವಾಸಿ ಪ್ರಜ್ವಲ್ (19) ಮೃತ್ಯು.
ಮಾರ್ಚ್ 22, 2024
0
ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು.
ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ ದಿ. ಅಶೋಕ್ - ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಎಂಬಾತ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಯುವಕ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಪ್ರಜ್ವಲ್ ಅಸುನೀಗಿದ್ದಾನೆ. ಮೃತಪಟ್ಟ ಪ್ರಜ್ವಲ್ ತಾಯಿ, ಸಹೋದರರಾದ: ಅಭಿಲಾಷ್, ಅಖಿಲೇಶ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾನೆ.

