Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಗ್ರಂಥಾಲಯಗಳು ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಸಹಕಾರಿ - ಕಿಶೋರ್ ಕುಮಾರ್ ಪಾವಳ.

ಗ್ರಂಥಾಲಯಗಳು ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಸಹಕಾರಿ - ಕಿಶೋರ್ ಕುಮಾರ್ ಪಾವಳ.
ಮಂಜೇಶ್ವರ: ಮೌಲ್ಯಯುತ ಜೀವನದೊಂದಿಗೆ ಆದರ್ಶ ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಗ್ರಂಥಾಲಯಗಳು ಸಹಕಾರಿಯಾಗಿದ್ದು ಉತ್ತಮ ನಾಗರಿಕರನ್ನಾಗಿ ಮಾಡುತ್ತದೆ ಎಂದು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಸದಸ್ಯರಾದ ಕಿಶೋರ್ ಕುಮಾರ್ ಪಾವಳ ತಿಳಿಸಿದರು.
ಅವರು ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಇದರ ನೇತೃತ್ವದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಉತ್ತಮ ಪುಸ್ತಕಗಳ ಓದುವಿಕೆ ಉತ್ತಮ ಜೀವನಕ್ಕೆ ಪ್ರೇರಣೆಯಾಗಿದೆ ಎಂದು ತಿಳಿಸಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊನಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಜಮೀಲ,ಕಮಲಾಕ್ಷಿ,ಚೈತ್ರ ಟೀಚರ್,ಗಣೇಶ್ ಕೊಡ್ಲಾಮೊಗರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪಾಸಾದ ದೀಕ್ಷಿತ ದಿನೇಶ್ ಕೊಡ್ಲಮೊಗರು, ಹಫೀಝ್ ಗುವೇದಪಡ್ಪು, +2 ಪಾಸಾದ ವರ್ಷ ಗಣೇಶ್ ಕೊಡ್ಲಾಮೊಗರು, ಧನುಶ್ ಮಾಧವ ಪರಂದಳ, ಹಫ್ರಿನ ಭಾನು, ಹಝ್ರಿನ ಭಾನು,ಡಿಗ್ರಿ ಪಾಸಾದ ಅನುಶ್ರೀ ಗುವೇದಪಡ್ಪು ಹಾಗೂ ಬಿ ಎಡ್ ನಲ್ಲಿ ಉತ್ತಮ ಅಂಕದೊಂದಿಗೆ ಪಾಸಾದ ಚೈತ್ರ ಶೆಟ್ಟಿಯವರನ್ನು ಗ್ರಂಥಾಲಯ ವತಿಯಿಂದ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವಾಚನಾ ಪಕ್ಷಾಚರಣೆಯ ಅಂಗವಾಗಿ ಜರಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಬಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಹೆಸರನ್ನು ಕುಮಾರಿ ರುಕ್ಷಾನ ಗುವೇದಪಡ್ಪು ವಾಚಿಸಿದರು.
ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ಗ್ರಂಥಪಾಲಕಿ ಜಯಶ್ರೀ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.