Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ. ವಯನಾಡ್ ಭೂಕುಸಿತದ ಸಂತ್ರಸ್ತರೊಂದಿಗೆ ಪ್ರಧಾನಿ ಮೋದಿ ಸಂವಾದ.

ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ. ವಯನಾಡ್ ಭೂಕುಸಿತದ ಸಂತ್ರಸ್ತರೊಂದಿಗೆ ಪ್ರಧಾನಿ ಮೋದಿ ಸಂವಾದ.
ಮೇಪ್ಪಾಡಿ: ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ. ಕಲ್ಪಟ್ಟಾದಿಂದ ರಸ್ತೆ ಮಾರ್ಗವಾಗಿ ಚೂರಲ್ಮಲ ತಲುಪಿದ ಮೋದಿ, ವೆಳ್ಳಾರ್ಮಲ ಶಾಲೆಯ ಹಿಂದಿನ ಹದಗೆಟ್ಟ ರಸ್ತೆಯಲ್ಲಿ ನಡೆದು ಅಲ್ಲಿನ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯದರ್ಶಿ ವಿ.ವೇಣು, ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮತ್ತು ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಅವರು ಪ್ರಧಾನಿಗೆ ಮಾಹಿತಿ ನೀಡಿದರು.
ಪ್ರಧಾನಿ ನಡೆದಾಡುವ ಈ ರಸ್ತೆಯ ಬಳಿ ಹಲವು ಮನೆಗಳಿದ್ದವು. ಈಗ ಈ ಭಾಗ ಕಲ್ಲುಗಳಿಂದ ತುಂಬಿದೆ.
ಬಳಿಕ ಅದೇ ಮಾರ್ಗವಾಗಿ ಹಿಂತಿರುಗಿ ಸೇನೆ ನಿರ್ಮಿಸಿರುವ ಬೈಲಿ ಸೇತುವೆ ಮೂಲಕ ನಡೆದುಕೊಂಡು ಬಂದಿದ್ದಾರೆ ಮೋದಿ.
ಮಿಷನ್ ತಂಡವು ದುರಂತದ ಪ್ರಮಾಣವನ್ನು ಮೋದಿಯವರಿಗೆ ವಿವರಿಸಿದೆ.
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಲು ಮತ್ತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತರ ಕಷ್ಟಗಳನ್ನು ಆಲಿಸಿದರು.
ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ಅವರೊಂದಿಗಿದೆ ಎಂದು ಹೇಳಿದರು. ಭೂಕುಸಿತದ ವೈಮಾನಿಕ ಸಮೀಕ್ಷೆಯ ಸಂದರ್ಭದಲ್ಲಿ, ಭೂಕುಸಿತಕ್ಕೆ ಕಾರಣವೇನು ಎಂದು ಪ್ರಧಾನಿ ಕೇಳಿದರು ಮತ್ತು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು. ಈ ವೇಳೆ ಸಿಎಂ ಪಿ ವಿಜಯನ್ ಕೂಡ ಜೊತೆಗಿದ್ದರು. ಕಣ್ಣೂರಿಗೆ ಬಂದಿಳಿದ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ವಯನಾಡ್ ಕಲೆಕ್ಟರೇಟ್ ತಲುಪಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಕಣ್ಣೂರಿಗೆ ಹಿಂತಿರುಗಿ ಸಂಜೆ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಮರಳಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.