ಮಂಜೇಶ್ವರ ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವೀ ಸಮಾಲೋಚನಾ ಸಭೆ.
ಡಿಸೆಂಬರ್ 25, 2024
0
ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವೀ ಸಮಾಲೋಚನಾ ಸಭೆ.
ಮಂಜೇಶ್ವರ: ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾರ್ಚ್ ತಿಂಗಳ 01 ರಿಂದ ಮೊದಲ್ಗೊಂಡು 08 ರ ವರೆಗೆ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವೀ ಸಮಾಲೋಚನಾ ಸಭೆಯು ದೇವಸ್ಥಾನದ ಪ್ರಭಾರ ಅಧ್ಯಕ್ಷರಾದ ಹರೀಶ್ಚಂದ್ರ ಮಂಜೇಶ್ವರ್ ರವರ ಅಧ್ಯಕ್ಷತೆಯಲ್ಲಿ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ಆಡಳಿತ ಮೋಕ್ತೇಸರರಾದ ವಿಶ್ವನಾಥ ಪೊಯ್ಯಕಂಡ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಯಾನಂದ ಬಂಗೇರ, ಕಾರ್ಯಾಧ್ಯಕ್ಷ ರಾಜ ಶ್ರೀ ದಿನೇಶ್ ನಟ್ಟಿಬೈಲ್ ಹಾಗೂ ಹಿರಿಯರ ಸಮ್ಮುಖದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯನ್ನು ರೂಪಿಸುವುದರೊಂದಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಉದಯ ಕುಮಾರ್ ಆನೆಬಾಗಿಲು ಸ್ವಾಗತಿಸಿ, ಪ್ರದೀಪ್ ಅಂಜರೆ ಧನ್ಯವಾದವಿತ್ತರು, ಹರೀಶ್ ಶೆಟ್ಟಿ ಮಾಡ ಕಾರ್ಯಕ್ರಮ ನಿರೂಪಿಸಿದರು.



