Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಉದ್ಯಾವರ ಮಾಡದ ರಿಕ್ಷಾ ಚಾಲಕ ಪ್ರಕಾಶ್ (53) ಹೃದಯಾಘಾತದಿಂದ ನಿಧನ.

ಉದ್ಯಾವರ ಮಾಡದ ರಿಕ್ಷಾ ಚಾಲಕ ಪ್ರಕಾಶ್ (53) ಹೃದಯಾಘಾತದಿಂದ ನಿಧನ.
ಮಂಜೇಶ್ವರ: ಉದ್ಯಾವರ ಮಾಡ ಕೆರೆ ಬಳಿ ನಿವಾಸಿ, ಮಾಡದಲ್ಲಿ ರಿಕ್ಷಾ ಚಾಲಕರಾಗಿರುವ ಪ್ರಕಾಶ್ (53) ಹೃದಯಾಘಾತಗೊಂಡು, ಹೊಸಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದು, ಕಿಡ್ನಿ ವೈಫಲ್ಯದಿಂದ ಊರಿಗೆ ಮರಳಿ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಮೃತರು ತಂದೆ: ಪೂವಪ್ಪ ಬೆಲ್ಚಾಡ, ತಾಯಿ: ಮಾಧವಿ, ಪತ್ನಿ: ಅಕ್ಷತಾ, ಪುತ್ರಿ: ಸಿಂಚನ, ಸಹೋದರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣ್ಣಾರ್ ದೈವಗಳ ಕ್ಷೇತ್ರದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಚಪ್ಪಾಡ, ಸಹೋದರಿ: ಸುಲೋಚನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ಕೊಲ್ಯದಲ್ಲಿರುವ ಹವಾನಿಯಂತ್ರಿತ ಶವಾಶನದಲ್ಲಿರಿಸಲಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಮನೆಗೆ ತರಲಾಗುವುದು. ಬಳಿಕ ಉದ್ಯಾವರ ಮಾಡ ಸಾರ್ವಜನಿಕ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮನೆಮಂದಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.