ಸಂತಡ್ಕ ದೈವ ಕ್ಷೇತ್ರದ ಬ್ರಹ್ಮಕಲಶೋತ್ಸವದಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ, ರಾತ್ರಿ ಹನುಮಗಿರಿ ಮೇಳದವರಿಂದ "ಸಮಗ್ರ ಭೀಷ್ಮ" ಯಕ್ಷಗಾನ ಬಯಲಾಟ.
ಜನವರಿ 21, 2025
0
ಸಂತಡ್ಕ ದೈವ ಕ್ಷೇತ್ರದ ಬ್ರಹ್ಮಕಲಶೋತ್ಸವದಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ, ರಾತ್ರಿ ಹನುಮಗಿರಿ ಮೇಳದವರಿಂದ "ಸಮಗ್ರ ಭೀಷ್ಮ" ಯಕ್ಷಗಾನ ಬಯಲಾಟ.
ಮಂಜೇಶ್ವರ: ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಶ್ರೀ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಿನ್ನೆ ಬೆಳಗ್ಗೆ ದೇವತಾ ಪ್ರಾರ್ಥನೆ, ಆಲಯ ಪರಿಗ್ರಹ, ಗಣಪತಿ ಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ, ಸಂಜೆ ಪುಣ್ಯಾಹ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಸಾಂಸ್ಕತಿಕ ಕಾರ್ಯಕ್ರಮದಂಗವಾಗಿ ವಿಜಯ ಫ್ರೆಂಡ್ಸ್ ಕ್ಲಬ್ ಸಂತಡ್ಕ ಪ್ರಾಯೋಜಕತ್ವದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದವರಿಂದ "ಸಮಗ್ರ ಭೀಷ್ಮ" ಕಥಾ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಿತು.


