Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಗಳೂರು ಗುಂಪು ಹತ್ಯೆ, ವಯನಾಡು ಮೂಲದ ಅಶ್ರಫ್ ಮೃತದೇಹ ತಾಯ್ನಾಡಿಗೆ ರವಾನೆ.

ಮಂಗಳೂರು ಗುಂಪು ಹತ್ಯೆ, ವಯನಾಡು ಮೂಲದ ಅಶ್ರಫ್ ಮೃತದೇಹ ತಾಯ್ನಾಡಿಗೆ ರವಾನೆ.
ಮಂಜೇಶ್ವರ: ಮೊನ್ನೆ ರವಿವಾರ ಮಂಗಳೂರಿನ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿದ್ದು, ವ್ಯಕ್ತಿ ಕೇರಳದ ವಯನಾಡು ಜಿಲ್ಲೆಯ ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಮಾಹಿತಿ ಅರಿತ ಕೂಡಲೇ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ವಯನಾಡು ಶಾಸಕ ಅಡ್ವಕೇಟ್ ಟಿ. ಸಿದ್ದೀಕ್ ಅವರನ್ನು ಸಂಪರ್ಕಿಸಿದ್ದು, ತಕ್ಷಣವೇ ರಾತ್ರಿ ಹೊತ್ತಿನಲ್ಲಿ ಮೃತನ ಸಹೋದರ ಅಬ್ದುಲ್ ಜಬ್ಬಾರ್ ಹಾಗೂ ಕುಟುಂಬಸ್ಥರು ಮಂಗಳೂರಿಗೆ ತಲುಪಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಬಳಿಕ
ಮೃತದೇಹವನ್ನು ಮಂಗಳೂರು ಬಂದರಿನ ಜೀನತ್ ಬಕ್ಷ್ ಜುಮಾ ಮಸೀದಿಯಲ್ಲಿ ಸ್ನಾನ ಮಾಡಿಸಿ, ಮಯ್ಯತ್ತ್ ನಮಾಜಿನ ವಿಧಿ ವಿಧಾನಗಳ ಪೂರ್ತಿಗೊಳಿಸಿ ನಂತರ ಬುಧವಾರ ಮುಂಜಾನೆ 5 ಗಂಟೆಗೆ ಪೊಲೀಸ್ ಜೀಪಿನ ಬೆಂಗಾಲಿನೊಂದಿಗೆ ಕೇರಳಕ್ಕೆ ಕೊಂಡೊಯ್ಯಲಾಯಿತು. ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರ ನಿರ್ದೇಶನದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹಲ್ ಹಮೀದ್ ಕೆ.ಕೆ, ಮಾಜಿ ಮೇಯರ್ ಅಶ್ರಫ್.ಕೆ, ಸುಹೈಲ್ ಕಂದಕ್, ಸುನಿಲ್ ಬಜಲಕೇರಿ, ಹರ್ಷಾದ್ ವರ್ಕಾಡಿ, ಲಾರೆನ್ಸ್ ಡಿ'ಸೋಜ, ವಾಹಿದ್ ಕುದ್ರೋಳಿ ಮುಂತಾದವರು ಮುಂಜಾನೆವರೆಗೂ ಸ್ಥಳದಲ್ಲಿದ್ದು ಪ್ರಕ್ರಿಯೆಗಳಿಗೆ ನೆರವಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.