ಮಾರ್ಚ್ 14 ರಂದು ಗುಡ್ಡೆಮನೆ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವದ ನೇಮೋತ್ಸವ.
ಪುತ್ತೂರು: ಹಾರಾಡಿಯ ಗುಡ್ಡೆಮನೆ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವದ ನೇಮೋತ್ಸವವು ಮಾರ್ಚ್ ತಿಂಗಳ 14 ರಂದು ಶನಿವಾರ ನಡೆಯಲಿದೆ. ಅಂದು ಬೆಳಗ್ಗೆ ಗಣಹೋಮ, ತಂಬಿಲ, ಸಂಜೆ 6.00 ಕ್ಕೆ ಭಂಡಾರ ಆಗಮನ, ರಾತ್ರಿ 8.30 ಕ್ಕೆ ಅನ್ನ ಸಂತರ್ಪಣೆ, ರಾತ್ರಿ 9.00 ರಿಂದ ದೈವಗಳ ನೇಮೋತ್ಸವ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ ಗುಡ್ಡೆಮನೆ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
